ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ಗೋಪಾಲಯ್ಯ ಅವರು ಇಂದು ಹಾಸನ ತಾಲ್ಲೂಕಿನ ಹೂವಿನ ಹಳ್ಳಿ ಕಾವಲಿನಲ್ಲಿ ಬೆಳೆ ಸಮೀಕ್ಷೆ ಆಪ್ ಪ್ರಾಯೋಗಿಕ ಪರೀಕ್ಷೆ ನಡೆಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಆರ್.ಗಿರೀಶ್ , ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಎ.ಪರಮೇಶ್,ಉಪವಿಭಾಗಾಧಿಕಾರಿ ಡಾ. ನವೀನ್ ಭಟ್, ಉಸ್ತುವಾರಿ ಸಚಿವರ ಆಪ್ತಕಾರ್ಯದರ್ಶಿ ಕಾಂತರಾಜು, ಜಂಟಿ ಕೃಷಿ ನಿರ್ದೇಶಕರಾದ ರವಿ ಮತ್ತಿತರರು ಹಾಜರಿದ್ದರು.
Tags
ಹಾಸನ