ಮೈಸೂರು ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ನೇಮಕ



 ಬೆಂಗಳೂರು: ಮೈಸೂರು ಜಿಲ್ಲಾಧಿಕಾರಿ ಬಿ.ಶರತ್ ಅವರನ್ನ ಒಂದೇ ತಿಂಗಳಲ್ಲಿ ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶಿಸಿದೆ. ಶರತ್ ಜಾಗಕ್ಕೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರನ್ನ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ವರ್ಗಾವಣೆ ಯಾಕೆ?: ಒಂದು ತಿಂಗಳ ಹಿಂದೆ ಶರತ್ ಮೈಸೂರು ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ದರು. ಆದ್ರೆ ಕಳೆದ ಒಂದು ತಿಂಗಳಿನಿಂದ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಸೋಂಕಿನ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಯಾವುದೇ ಪ್ಲಾನ್ ಮಾಡಿಕೊಂಡಿರಲಿಲ್ಲ. ಸಾವಿನ ಸಂಖ್ಯೆ, ಪಾಸಿಟಿವ್ ಸಂಖ್ಯೆ ಹೆಚ್ಚುತ್ತಿದ್ದರೂ ತಾತ್ಕಾಲಿಕವಾಗಿ ಆಸ್ಪತ್ರೆ ತೆರೆಯಲು ಜಿಲ್ಲಾಧಿಕಾರಿ ಶರತ್ ಮುಂದಾಗಿರಲಿಲ್ಲ. ಕೊರೊನಾ ಏರಿಕೆ ನಡುವೆ ಅತಿ ಸರಳ ದಸರಾ ಆಚರಣೆ ಸರ್ಕಾರಕ್ಕೆ ದೊಡ್ಡ ಸವಾಲು ಆಗಿದೆ. ಆದ್ರೆ ಇದುವರೆಗೂ ಜಿಲ್ಲಾಧಿಕಾರಿ ದಸರಾ ಆಚರಣೆ ಯೋಜನೆಯನ್ನ ಸರ್ಕಾರಕ್ಕೆ ಸಲ್ಲಿಸದ ಹಿನ್ನೆಲೆ ಶರತ್ ಅವರ ವರ್ಗಾವಣೆ ಆಗಿದೆ ಎಂದು ತಿಳಿದು ಬಂದಿದೆ.

ಇತ್ತ ಶರತ್ ಅವರಿಗೆ ಕರೆ ಮಾಡಿರುವ ಸಿಎಂ ಬಿ.ಎಸ್.ಯಡಿಯೂರಪ್ಪ, ಬೇರೆ ಸೂಕ್ತ ಸ್ಥಳ ನೀಡುತ್ತೇವೆ. ಕಾನೂನು ತೊಡಕು ಮಾಡಿಕೊಳ್ಳಬೇಡಿ ಎಂದು ಹೇಳಿದ್ದಾರೆ ಎನ್ನಲಾಗಿದೆ. ಶರತ್ ಜಾಗಕ್ಕೆ ರೋಹಿಣಿ ಸಿಂಧೂರಿ ಅವರನ್ನೇ ನೇಮಿಸಬೇಕೆಂದು ಸಿಎಂ ಮೇಲೆ ಒತ್ತಡ ಹಾಕಲಾಗಿತ್ತು ಎಂದು ತಿಳಿದು ಬಂದಿದೆ.

Post a Comment

Previous Post Next Post