ಹಾಸನ ಮಕ್ಕಳ ತಜ್ಞ ಡಾಃ ರಾಜೀವ್ ನಿಧನಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಕಂಬನಿ


  ಡಾ.ರಾಜೀವ್ ಅವರು ಅಪ್ಪಟ ಗ್ರಾಮೀಣ ಹಿನ್ನೆಲೆಯಿಂದ ಬಂದು ಬಡಜನರ ಕಷ್ಟಸುಖ ಅರ್ಥೈಸಿಕೊಂಡು ಅದರಂತೆಯೇ ಕೆಲಸ ಮಾಡಿದ ಉದಾತ್ತ ವ್ಯಕ್ತಿತ್ವದವರು. 
ರೈತ ಕುಟುಂಬದಿಂದ ಬಂದು ವೈದ್ಯಕೀಯ ಲೋಕದಲ್ಲಿ ತಾವೇ ಮಾದರಿಯಾಗುವ ಮೂಲಕ ಉತ್ತಮ ಸಾಧನೆ ಮಾಡಿದ್ದರು.
ಮಕ್ಕಳ ಚಿಕಿತ್ಸೆ ವಿಷಯದಲ್ಲಿ ಡಾ.ರಾಜೀವ್ ಮನೆ ಮಾತಾಗಿದ್ದರು. ವೈದ್ಯವೃತ್ತಿಯ ಜೊತೆಗೆ ಅನೇಕ ಶಿಕ್ಷಣ ಸಂಸ್ಥೆಗಳನ್ನು ಹುಟ್ಟುಹಾಕಿ ಅನೇಕ ಮಕ್ಕಳೂ ಉನ್ನತ ವ್ಯಾಸಂಗ ಪಡೆಯಲು ಆಧಾರಸ್ತಂಭವಾಗಿದ್ದರು. ನಿಸ್ವಾರ್ಥ ಸೇವೆಯ ಮೂಲಕ ಇಡೀ ಸಮಾಜ ಮೆಚ್ಚುವ ಕೆಲಸ ಮಾಡಿದ್ದಾರೆ. ಸಮಾಜಕ್ಕೆ ಅವರಿಂದ ಇನ್ನೂ ದೊಡ್ಡ ಸೇವೆ ಲಭ್ಯವಾಗಬೇಕಿತ್ತು. ಆದರೆ ಇಂದು ಅವರು ನಮ್ಮ ನಡುವೆ ಇಲ್ಲ ಎಂಬುದು ವೈಯಕ್ತಿಕವಾಗಿ ಅತೀವ ನೋವು ತರಿಸಿದೆ. ಅವರ ಅಕಾಲಿಕ ನಿಧನ ನನ್ನ ಜಿಲ್ಲೆಗೆ ತುಂಬಲಾರದ ನಷ್ಟವಾಗಿದೆ. ಅವರ ಕುಟುಂಬಕ್ಕೆ ದೇವರು ದುಃಖ ಭರಿಸುವ ಶಕ್ತಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.
-ಹೆಚ್.ಡಿ.ದೇವೇಗೌಡ, ಮಾಜಿ ಪ್ರಧಾನ ಮಂತ್ರಿ

Post a Comment

Previous Post Next Post