ಸಚಿವ ಜೆಸಿ ಮಾಧುಸ್ವಾಮಿಗೆ ಕೊರೊನಾ ಸೋಂಕು

ಬೆಂಗಳೂರು: ಅಧಿವೇಶನ ಬೆನ್ನಲ್ಲೇ ಸೋಂಕಿತ ಜನಪ್ರತಿನಿಧಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇಂದು ಕಾನೂನು ಸಚಿವ ಮಾಧುಸ್ವಾಮಿ, ಕಾಂಗ್ರೆಸ್‍ನ ಹಿರಿಯ ಮುಖಂಡ ಹೆಚ್‍ಕೆ ಪಾಟೀಲ್‍ಗೆ ಸೋಂಕು ದೃಢವಾಗಿದ್ದು, ಇಬ್ಬರು ಆಸ್ಪತ್ರೆಗೆ ದಾಖಲಾಗಿದ್ದಾರೆ.



ಅಧಿವೇಶನದ ಬೆನ್ನಲ್ಲೇ ನಿನ್ನೆ ದಿನೇಶ್ ಗುಂಡೂರಾವ್‍ಗೆ ಕೊರೊನಾ ಸೋಂಕು ದೃಢವಾಗಿತ್ತು. ಇಂದು ಸಚಿವ ಮಾಧುಸ್ವಾಮಿ ಅವರಿಗೆ ಸೋಂಕು ದೃಢವಾಗಿದ್ದು, ಶೀಘ್ರ ಗುಣಮುಖರಾಗಲಿ ಎಂದು ಸಿಎಂ ಬಿಎಸ್‍ವೈ ಸೇರಿದಂತೆ ಹಲವು ನಾಯಕರು ಪ್ರಾರ್ಥನೆ ಮಾಡುವುದಾಗಿ ತಿಳಿಸಿದ್ದಾರೆ.


ಕೆಲ ದಿನಗಳ ಹಿಂದೆ ಸಚಿವರ ಕಾರಿನ ಚಾಲಕ ಮತ್ತು ಮನೆಯ ಕೆಲಸಗಾರನಿಗೆ ಸೋಂಕು ದೃಢವಾದ ಹಿನ್ನೆಲೆಯಲ್ಲಿ ಮಾಧುಸ್ವಾಮಿ ಅವರು ಕೊರೊನಾ ಪರೀಕ್ಷೆಗೆ ಒಳಗಾಗಿದ್ದರು ಎಂಬ ಮಾಹಿತಿ ಲಭಿಸಿದೆ.

Post a Comment

Previous Post Next Post