ಚನ್ನರಾಯಪಟ್ಟಣ: ತಾಲೂಕಿನ ಬಾಗೂರು ಹೋಬಳಿ ತಿಮ್ಮಾಪುರ ಗ್ರಾಮದ ಗಡಿಯಲ್ಲಿ ನಕ್ಷತ್ರ ಆಮೆ ಹಿಡಿದು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬುಧವಾರ ಬಂಧಿಸಿ ಒಂದು ಆಮೆ ಹಾಗೂ ಬೈಕ್ ವಶಪಡಿಸಿಕೊಂಡಿದ್ದಾರೆ.
ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕು ತಿಮ್ಮನಹಳ್ಳಿಯ ನಿವೃತ್ತ ಶಿಕ್ಷಕ ಜಯಣ್ಣ (62) ಹಾಗೂ ಆನೇಕಲ್ ತಾಲೂಕು ಜಿಗಣಿ ಗ್ರಾಮದ ರಮೇಶ್ (49) ಬಂಧಿತರು. ಕೃತ್ಯದಲ್ಲಿ ಭಾಗಿಯಾಗಿದ್ದ ನಾಲ್ವರು ಪರಾರಿಯಾಗಿದ್ದಾರೆ. ಅವರನ್ನು ಚೌಡೇನಹಳ್ಳಿ ದುರ್ಗಪ್ಪ, ಮೂರ್ತಿ, ಶಿವು ಹಾಗೂ ಅಣ್ಣಪ್ಪ ಎಂದು ಗುರುತಿಸಲಾಗಿದ್ದು ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ.
ವಲಯ ಅರಣ್ಯ ಇಲಾಖೆ ಅಧಿಕಾರಿ ಹಾಗೂ ಸಿಬ್ಬಂದಿ ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಬುಧವಾರ ಬೆಳಗ್ಗೆ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು ನಕ್ಷತ್ರ ಆಮೆ ಹಾಗೂ ಕೃತ್ಯಕ್ಕೆ ಬಳಸಿದ್ದ ಬೈಕೊಂದನ್ನು ವಶಪಡಿಸಿಕೊಳ್ಳಲಾಗಿದೆ.