ಪಂಜ ಕುಸ್ತಿ ವಿಜೇತರಿಗೆ ಅಭಿನಂದನೆ

ಹಾಸನ ಮಾ.09 :ಮೈಸೂರಿನಲ್ಲಿ ನಡೆದ ರಾಜ್ಯ ಮಟ್ಟದ ಸೂಪರ್ ಲೀಗ್ ಪಂಜ ಕುಸ್ತಿ ಸ್ಪರ್ಧೆಯಲ್ಲಿ ಹಾಸನ ಜಿಲ್ಲೆಯ ವಿವಿಧ ವ್ಯಾಯಾಮ ಶಾಲೆಯ ವಿದ್ಯಾರ್ಥಿಗಳು ಸ್ಪರ್ಧಿಸಿ ಒಟ್ಟು 12 ಚಿನ್ನದ ಪದಕಗಳನ್ನು ಗಳಿಸಿಕೊಂಡಿದ್ದು, ಶರತ್ ಎಂಬುವವರು ಅಗ್ರಸ್ಥಾನ ಪಡೆದುಕೊಂಡಿದ್ದಾರೆ.
 ಇದೇ ತಿಂಗಳು ಚಿಕ್ಕಮಗಳೂರಿನಲ್ಲಿ ನಡೆಯುವ ರಾಜ್ಯಮಟ್ಟದ ಸ್ಪರ್ಧೆಗೆ ಈ ಎಲ್ಲಾ ಸ್ಪರ್ಧಿಗಳು ಅರ್ಹತೆಯನ್ನು ಪಡೆದುಕೊಂಡಿದ್ದಾರೆ.

ರಾಷ್ಟ್ರಮಟ್ಟದ ಸ್ಪರ್ಧೆಯು   ಹೈದರಾಬಾದಿನಲ್ಲಿ ನಡೆಯಲಿದೆ. 

ಸೂಪರ್ ಲೀಗ್ ಪಂಜ ಕುಸ್ತಿ ಸ್ಪರ್ಧೆಯಲ್ಲಿ ವಿಜೇತರಾದ ವರಿಗೆ ಹಾಸನ ಜಿಲ್ಲಾ ಪಂಜ ಕುಸ್ತಿ ಸಂಘದ ಅಧ್ಯಕ್ಷರಾದ ಡಾ. ಗಿರಿಗೌಡ ಮತ್ತು ಸದಸ್ಯರುಗಳು ಅಭಿನಂದಿಸಿದ್ದಾರೆ.

Post a Comment

Previous Post Next Post