ಅರಸೀಕೆರೆ ನಗರದ ಕಂತೆನಹಳ್ಳಿ ಬಳಿ ಇರುವ 'ಅರಸಿ ಪಾರ್ಕ್' ನ ಬಳಿ ಗಾಂಜ ಮಾರಾಟ ಮಾಡುತ್ತಿದ್ದ ಜಾಲವೊಂದನ್ನ ಭೇದಿಸಲಾಗಿದೆ.
ಖಚಿತ ಮಾಹಿತಿಯನ್ನಾಧರಿಸಿ ಅರಸೀಕೆರೆ ನಗರ ಪೊಲೀಸ್ ಇನ್ಸ್ಪೆಕ್ಟರ್ ಸೋಮೇಗೌಡ ಸಿಬ್ಬಂದಿಗಳಾದ ರಂಗಸ್ವಾಮಿ, ಕೀರ್ತಿಕುಮಾರ್,ಹರೀಶ್, ರಘು, ನಾಗರಾಜ್ ರೊಂದಿಗೆ ದಾಳಿ ನಡೆಸಿ ಆರೋಪಿಯ ಹೆಡೆಮುರಿ ಕಟ್ಟಿದ್ದಾರೆ.
ಈ ಸಂದರ್ಭದಲ್ಲಿ ಉಪ ತಹಶೀಲ್ದಾರ್ ಪಾಲಕ್ಷ,
ಅರಣ್ಯ ಇಲಾಖೆ ಅಧಿಕಾರಿಗಳು, ಕಂದಾಯ ಇಲಾಖೆಯ ರವಿನ್ಯೂ ಇನ್ಸ್ಪೆಕ್ಟರ್ ಮಂಜುನಾಥ್ ಇದ್ದರು.
ಆರೋಪಿಯನ್ನು ವಶಕ್ಕೆ ಪಡೆದಿರುವ ಖಾಕಿ ಪಡೆ ಕೇಸ್ ದಾಖಲಿಸಿಕೊಂಡು, ಹೆಚ್ಚಿನ ತನಿಖೆ ನಡೆಸುತ್ತಿದೆ.
ವರದಿ - ಎಸ್ ಎಲ್ ಎನ್ ಯೋಗೇಶ್