ಆಲೂರು : ಬೆಂಗಳೂರಿನಿಂದ ಮಂಗಳೂರಿಗೆ ಖಾಸಗಿ ಸಂಸ್ಥೆಯ ಕಾರುಗಳನ್ನು ತುಂಬಿಕೊಂಡು ಸಾಗಿಸುತ್ತಿದ್ದ ಕಂಟೇನರ್ ವಾಹನವೊಂದು ರಾಷ್ಟ್ರೀಯ ಹೆದ್ದಾರಿ 75ರ ಚೌಲ್ಗೆರೆ ಗ್ರಾಮದ ಸಮೀಪ ತಡರಾತ್ರಿ ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದ್ದು ಚಾಲಕ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 75 ರಲ್ಲಿ
ವಿಸ್ತರಣೆ ಕಾಮಗಾರಿ ನಡೆಯುತ್ತಿದ್ದು ರಸ್ತೆಯ ಎರಡೂ ಬದಿಗೆ ಯಾವುದೇ ಸೂಚನಾ ಫಲಕ ಅಳವಡಿಸದೆ ಇರುವುದರಿಂದ ವಾಹನ ಚಾಲಕರು ವೇಗವಾಗಿ ಬರುವುದರಿಂದ ಅಪಘಾತ ಸಂಭವಿಸುತ್ತಿವೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
Tags
ಆಲೂರು