ರಾಜ್ಯದ ಎಲ್ಲ ಸಾರಿಗೆ ನೌಕರರ ರಜೆ ರದ್ದು: ಶಿವಯೋಗಿ ಕಳಸದ

ಬೆಂಗಳೂರು: ನಾಳೆ ಕೆಎಸ್ಆರ್ಟಿಸಿ ನೌಕರರು ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಸಾರಿಗೆ ನೌಕರರ ರಜೆಯನ್ನು ರದ್ದುಗೊಳಿಸಿ ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ ಆದೇಶ ಹೊರಡಿಸಿದ್ದಾರೆ.



ಈ ಕುರಿತು ಸುತ್ತೋಲೆ ಬಿಡುಗಡೆ ಮಾಡಿರುವ ಶಿವಯೋಗಿ ಕಳಸದ, ವಾರದ ತುರ್ತು ರಜೆಯನ್ನು ಹೊರತುಪಡಿಸಿ ಉಳಿದೆಲ್ಲ ನೌಕರರ ರಜೆಯನ್ನು ರದ್ದುಗೊಳಿಸಲಾಗಿದೆ. ನೌಕರರು ಅನಗತ್ಯ ರಜೆ ಹಾಕಿದರೆ ವೇತನ ಕಡಿತ ಮಾಡಲಾಗುತ್ತದೆ ಮತ್ತು ಶಿಸ್ತುಕ್ರಮ ಜರುಗಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಸಾರಿಗೆ ವ್ಯವಸ್ಥೆ ಸಹಜ ಸ್ಥಿತಿಗೆ ಬರುವವರೆಗೂ ಈ ಸುತ್ತೋಲೆ ಅನ್ವಯವಾಗಲಿದೆ ಎಂದು ತಿಳಿಸಲಾಗಿದೆ.

Post a Comment

Previous Post Next Post