ಕೊರೊನಾ ದೃಢಪಟ್ಟರೆ ಆತಂಕ ಪಡಬೇಡಿ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸಲಹೆ ನೀಡಿದ್ದಾರೆ

 ಕೊರೊನಾ ದೃಢಪಟ್ಟರೆ ಆತಂಕಕ್ಕೊಳಗಾಗುವುದು ಬೇಡ. ಶೇ.90ರಷ್ಟು ಸೋಂಕಿತರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಅಗತ್ಯವಿಲ್ಲ. ಸೋಂಕಿತರು ತಮ್ಮಮನೆಯಲ್ಲೇ ಚಿಕಿತ್ಸೆ ಪಡೆಯಬಹುದು. ರೆಮ್‌ಡೆಸಿವಿರ್ ಅಗತ್ಯದಷ್ಟು ಸಪ್ಪೆ ಇದೆ. ಮೈಲಾನ್ ಕಂಪನಿಯಿಂದ ತೆಗೆದುಕೊಂಡಿದ್ದಾರೆ. ಬಯೋಕಾನ್ ಅಧ್ಯಕ್ಷ ಮುಜುಂದಾರ್ ಷಾ ಅವರೊಂದಿಗೂ ಕೂಡ ಮಾತನಾಡಿದ್ದೇನೆ. ಈ ತಿಂಗಳಲ್ಲಿ ವಯಲ್ಸ್ ಕೊಡೇನೆ ಎಂದಿದ್ದಾರೆ. ಜನರು ಆತಂಕ, ಭಯ ಪಡುವ ಆವಶ್ಯಕತೆ ಇಲ್ಲ ಎಂದು ಡಾ ಕೆ.ಸುಧಾಕರ್‌ ತಿಳಿಸಿದ್ದಾರೆ.

ಯಾರಿಗೋ ಒಬ್ಬ ವ್ಯಕ್ತಿಗೆ ಆಕ್ಸಿಜನ್ ಕಡಿಮೆ ಅಗ್ತಿದೆ. ಯುಕೆಯಲ್ಲಿ ಟೆಲಿ ಕಾಲರ್ ಮೂಲಕ ಔಷಧಿ ಪಡೆಯುತ್ತಿದ್ದಾರೆ. ಯಾರಿಗೆ ನಿಜವಾಗಿಯೂ ಅವಶ್ಯಕತೆ ಇದೆ ಅವ್ರು ಮಾತ್ರ ಆಸ್ಪತ್ರೆ ತೆರಳಿ, ದಯವಿಟ್ಟು ನಾನು ಮನವಿಮಾಡುತ್ತೇನೆ. ಕೆಲವು ಕ್ರಮಗಳನ್ನು ತೆಗೆದುಕೊಳ್ಳಲು ಮುಂದಾಗಿದ್ದೇವೆ.


ಇಂತಹ ಸಾಂಕ್ರಾಮಿಕ ರೋಗ ಬಂದಾಗ ತೊಂದರೆ ಆಗೋದು ಸಹಜ ಅಮೇರಿಕಾದ ಬಹುದೊಡ್ಡ ದೇಶದಲ್ಲೇ ಆರ್ಥಿಕತೆ ಕುಸಿದಿದೆ. ಅದೆ ಹೊಲಿಸಿದ್ರೆ ನಮ್ಮಲ್ಲಿ ಪರಿಸ್ಥಿತಿ ಬೇರೆಯೇ ಇದೆ. ದಿನನಿತ್ಯ ಪ್ರಾಣಾಯಾಮ ಮಾಡಿ. ಇದು ಶ್ವಾಸಕೋಶಕ್ಕೆ ಉತ್ತಮ. ರೋಗನಿರೋಧಕ ಶಕ್ತಿ ಹೆಚ್ಚಾದಾಗ ಯಾವ ರೋಗ ಹತ್ತಿರ ಬರುವುದಿಲ್ಲ. ವೀಕೆಂಡ್ ಕರ್ಪ್ಯೂಗಳನ್ನು ತಪ್ಪದೇ ಪಾಲಿಸಬೇಕು. ನೈಟ್ ಕರ್ಪ್ಯೂ ಬಗ್ಗೆ ಕೆಲವರು ಟೀಕೆ ಮಾಡಿದ್ದಾರೆ. ಬೇರೆ ದೇಶಗಳಲ್ಲಿ ಎರಡನೇ ಅಲೆ, ಮೂರನೇ ಅಲೇ ನಾಲ್ಕನೇ ಅಲೆ ಬಂದಿದೆ. ಎಲ್ಲ ರಾಜ್ಯಗಳಲ್ಲೂ ಈ ರೂಪಾಂತರ ಗೊಂಡಿರುವ ವೈರಣು ಇದೆ. ವೈದ್ಯಕೀಯ ಜಗತ್ತಿಗೆ ಸವಾಲು ಆಗಿರೋ ವೈರಣು ಇದು. ಇಡೀ ದೇಶದಲ್ಲಿಯೇ ಆರೋಗ್ಯ ತುರ್ತು ಪರಿಸ್ಥಿತಿ ಇದೆ. ಇದು ಬರೀ ನಮ್ಮ ರಾಜ್ಯದಲ್ಲಿ ಮಾತ್ರಾನಾ? ಯಾವುದೇ ಸಂದರ್ಭದಲ್ಲಿ ಸರ್ಕಾರ ಹಿಂದೇಟು ಹಾಕುವುದಿಲ್ಲ ಜನರನ್ನು ಕೈ ಬಿಡುವುದಿಲ್ಲ ಎಂದು ಸುಧಾಕರ್ ತಿಳಿಸಿದ್ದಾರೆ.

ಜನರು ಪ್ರತಿ ದಿನ ಬೆಳಗ್ಗೆ ಪ್ರಾಣಾಯಾಮ ಮಾಡಬೇಕು

ಜನರು ಪ್ರತಿ ದಿನ ಬೆಳಗ್ಗೆ 30 ನಿಮಿಷ ಲಘು ವ್ಯಾಯಾಮ ಮಾಡಬೇಕು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸಲಹೆ ನೀಡಿದ್ದಾರೆ. ಮುಂಜಾನೆ 5-6 ಗಂಟೆಗೆ ಒಳ್ಳೇ ಗಾಳಿ ಇರುವಲ್ಲಿ ಕುಳಿತು ಪ್ರಾಣಾಯಾಮ ಮಾಡಿ. ಇದರಿಂದ ಶ್ವಾಸಕೋಶದ ಉಸಿರಾಡುವ ಶಕ್ತಿ ಬಲವಾಗುತ್ತೆ. ಬೇರೆಯವರಿಗೆ ಆಕ್ಸಿಜನ್ ಸಿಗುತ್ತಿಲ್ಲವೆಂಬ ಸುದ್ದಿ ನೋಡಿ ಜನರು ಆತಂಕಕ್ಕೆ ಒಳಗಾಗುತ್ತಿದ್ದಾರೆ. ಕೊವಿಡ್ ಪಾಸಿಟಿವ್ ಬಂದ ತಕ್ಷಣ ಆಕ್ಸಿಜನ್ ಕೇಳಿದ್ದಾರೆ. ಶೇ.95ರಷ್ಟು ಸೋಂಕಿತರಿಗೆ ಆಸ್ಪತ್ರೆಯ ಅವಶ್ಯಕತೆ ಇಲ್ಲ ಎಂದು ಬೆಂಗಳೂರಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸಲಹೆ

Post a Comment

Previous Post Next Post