ಚಾಕೇನಹಳ್ಳಿಯಲ್ಲಿ ಜಿಲೆಟಿನ್​ ಸ್ಫೋಟ ಪ್ರಕರಣ: ಸ್ಥಳಕ್ಕೆ ಐಜಿಪಿ, ಎಸ್​ಪಿ ಭೇಟಿ

 ಹಾಸನ: ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಚಾಕೇನಹಳ್ಳಿಯಲ್ಲಿ ಜಿಲೆಟಿನ್​ ಸ್ಫೋಟ ಘಟನೆ ಹಿನ್ನೆಲೆಯಲ್ಲಿ ಸ್ಥಳಕ್ಕೆ ದಕ್ಷಿಣ ವಲಯದ ಐಜಿಪಿ ಪ್ರವೀಣ್ ಮಧುಕರ್ ಪವರ್, ಎಸ್​ಪಿ ಶ್ರೀನಿವಾಸಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು.

ಘಟನೆ ಬಗ್ಗೆ ಪ್ರತಿಕ್ರಿಯಿಸಿದ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಆರ್. ಶ್ರೀನಿವಾಸಗೌಡ, ಪ್ರಾಥಮಿಕ ಮಾಹಿತಿ ಪ್ರಕಾರ ಲೋಡಿಂಗ್​ ಅನ್​ಲೋಡಿಂಗ್​ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಚಾಕೇನಹಳ್ಳಿ ಕಟ್ಟೆ ಗ್ರಾಮದ ನಾಗೇಶ್ ಎಂಬ ಮಾಲೀಕತ್ವದ ದುರ್ಗಾಂಬ ಎಂಟರ್ಪ್ರೈಸಸ್ ಎಂಬ ಜಿಲೆಟಿನ್ ಸ್ಪೋಟಕ ವಸ್ತುಗಳ ದಾಸ್ತಾನು ಮಳಿಗೆಯಲ್ಲಿ ಸ್ಫೋಟ ನಡೆದಿದ್ದು ಸ್ಥಳದಲ್ಲಿಯೇ ಸಂಪತ್ ಎಂಬ ಯುವಕ ಸುಟ್ಟು ಕರಕಲಾದರೇ ಜೊತೆಯಲ್ಲಿದ್ದ ನಟರಾಜ ಹಾಗೂ ರವಿಕುಮಾರ್ ಸ್ಥಿತಿ ಚಿಂತಾಜನಕವಾಗಿದೆ.

ಸ್ಫೋಟದ ತೀವ್ರತೆಗೆ ಎರಡು ದ್ವಿಚಕ್ರ ವಾಹನಗಳು ಕೂಡ ಸುಟ್ಟು ಕರಕಲಾಗಿವೆ. ರವಿ ಹಾಗೂ ನಟರಾಜ್​ ಹಿಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿದೆ. ಕ್ವಾರಿಯಲ್ಲಿ ಕೆಲಸ ಮಾಡ್ತಿದ್ದ ಸಂಪತ್​ ಘಟನಾ ಸ್ಥಳಕ್ಕೆ ಯಾವ ಕಾರಣಕ್ಕೆ ಬಂದಿದ್ದರು ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ. ಆದರೆ ಘಟನೆ ಹೇಗಾಯಿತು ಎಂಬುದನ್ನು ಈಗ ಹೆಚ್ಚಿನ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳು ಗುಣಮುಖರಾದ ಬಳಿಕ ಗೊತ್ತಾಗಬೇಕಿದೆ ಎಂದು ತಿಳಿಸಿದ್ರು.

ನಾಗೇಶ್ ರವರನ್ನು ವಿಚಾರಣೆಗೆ ಬರುವಂತೆ ಹೇಳಲಾಗಿದ್ದು, ನಮಗೆ ಗೊತ್ತಾಗಿರುವ ಪ್ರಕಾರ ಸ್ಪೋಟಕಗಳನ್ನು ದ್ವಿಚಕ್ರವಾಹನದಲ್ಲಿ ಸಾಗಿಸಲು ಮುಂದಾಗಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ. ಜಿಲ್ಲೆಯಲ್ಲಿ ಸುಮಾರು ಐದರಿಂದ ಆರು ಕಲ್ಲುಗಣಿಗಾರಿಕೆಗೆ ಮಾತ್ರ ಅನುಮತಿಯನ್ನು ನೀಡಿದ್ದು ಉಳಿದೆಲ್ಲವೂ ಅಕ್ರಮ ಗಣಿಗಾರಿಕೆ ಎಂಬುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ.

ನಮ್ಮ ಕಣ್ತಪ್ಪಿಸಿ ಈ ಘಟನೆ ನಡೆದಿದೆ. ಯಾವುದೇ ಮುಂಜಾಗ್ರತಾ ಕ್ರಮ ವಹಿಸದೇ ಬೈಕ್​ನಲ್ಲಿ ಜಿಲೆಟಿನ್​ ಏಕೆ ಸಾಗಿಸುತ್ತಿದ್ರು ಎಂಬುದರ ಬಗ್ಗೆ ಪರಿಶೀಲನೆ ನಡೆಸಲಾಗ್ತಿದೆ ಎಂದು ಉಪವಿಭಾಗಾಧಿಕಾರಿ ಜಗದೀಶ್ ತಿಳಿಸಿದ್ರು.

Post a Comment

Previous Post Next Post