ಆಲೂರು ಪಟ್ಟಣದಲ್ಲಿ ಪೀಸ್ ಮತ್ತು ಅವೇರ್ ನೆಸ್ ಹಾಗೂ ಜೀವ ಸಂಜೀವಿನಿ ರಕ್ತನಿಧಿ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಆಲೂರು ಪಟ್ಟಣ ಪಂಚಾಯಿತಿ ಉಪಾಧ್ಯಕ್ಷರಾದ ತೌಫಿಕ್ ಪ್ರತಿಯೊಬ್ಬ ಜನಸಾಮಾನ್ಯರಿಗೂ ರಕ್ತದಾನದ ಮಹತ್ವ ಹಾಗೂ ಉಪಯೋಗಗಳ ಬಗ್ಗೆ ಅರಿವು ಮೂಡಿಸುವ ಇಂತಹ ಕಾರ್ಯಕ್ರಮಗಳು ಆಗಿಂದಾಗ್ಗೆ ನಡೆಯುತ್ತಿರಬೇಕು ಪ್ರತಿಯೊಬ್ಬ ಆರೋಗ್ಯವಂತ ವ್ಯಕ್ತಿಯು ಸಹ ಪ್ರತಿ 4ತಿಂಗಳಿಗೊಮ್ಮೆ ರಕ್ತದಾನ ಮಾಡಬಹುದಾಗಿದ್ದು ದೇಹದಲ್ಲಿ ಹೊಸ ರಕ್ತ ಕಣಗಳು ಉತ್ಪತ್ತಿಯಾಗಲು ರಕ್ತದಾನ ಸಹಕಾರಿಯಾಗಿದೆ ಎಂದು ತಿಳಿಸಿದರು .
ಬಳಸಿಬಳಸಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಈ ರಕ್ತದಾನ ಶಿಬಿರದಲ್ಲಿ ಸ್ವಯಂ ಪ್ರೇರಿತರಾಗಿ ಪೌರಕಾರ್ಮಿಕರು ,ಕೆ.ಇ.ಬಿ ನೌಕರರು, ಪತ್ರಕರ್ತರು ರಕ್ತದಾನ ಮಾಡುವುದರ ಜತೆಗೆ ಕಾರ್ಯಕ್ರಮದ ಯಶಸ್ಸಿಗೆ ಕಾರಣಕರ್ತರಾದರು .
Tags
ಆಲೂರು
