ಬೇಲೂರು:ಈ ಬಾರಿ ಜೆಡಿಎಸ್ ಪಕ್ಷ ಮತ್ತೆ ಪುರಸಭೆಯ ಅಧಿಕಾರ ಹಿಡಿಯುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಸಂಸದ ಪ್ರಜ್ವಲ್ ರೇವಣ್ಣ ತಿಳಿಸಿದರು.
ಪುರಸಭಾ ಚುನಾವಣೆ ಹಿನ್ನಲೆಯಲ್ಲಿ ಶ್ರೀ ಚನ್ನಕೇಶವ ದೇವಾಲಯದಲ್ಲಿ ಅಭ್ಯರ್ಥಿಗಳ ಗೆಲುವಿಗಾಗಿ ವಿಶೇಷ ಪೂಜೆ ಸಲ್ಲಿಸಿ ದೇಗುಲದಿಂದ ಪುರಸಭೆಯವರೆಗೂ ಪಾದಯಾತ್ರೆ ಮಾಡುವ ಮೂಲಕ ಆಗಮಿಸಿ ಜೆಡಿಎಸ್ ಪಕ್ಷದ ಅಭ್ಯರ್ಥಿಗಳ ಜೊತೆ ನಾಮಪತ್ರ ಸಲ್ಲಿಸಿ ಮಾತನಾಡಿದ ಅವರು ಈ ಬಾರಿ ನಮ್ಮ ನಿಷ್ಟಾವಂತ ಕಾರ್ಯಕರ್ತರಿಗೆ ಪಕ್ಷದಲ್ಲಿ ಯಾವುದೇ ಜಾತಿ ,ಮತ,ಭೇದವಿಲ್ಲದೆ ಎಲ್ಲಾ ಜನಾಂಗದವರಿಗೂ ಸಾಮಾಜಿಕ ನ್ಯಾಯ ದೊರಕಿಸುವ ಉದ್ದೇಶದಿಂದ ಜಾತ್ಯಾತೀತದ ನಿಲುವು ಸಿದ್ಧಾಂತ ಇಟ್ಟುಕೊಂಡು ಪ್ರತಿಯೊಬ್ಬರಿಗೂ ಸಹ ಸಮಾನವಾಗಿ ಟಿಕೇಟ್ ಹಂಚಿಕೆ ಮಾಡಲಾಗಿದೆ.ಈ ಹಿಂದೆ ಪುರಸಭೆಯಲ್ಲಿ ನಮ್ಮ ಪಕ್ಷ ಅಧಿಕಾರದಲ್ಲಿದ್ದಾಗ ಉತ್ತಮ ಆಡಳಿತ ನೆಡೆಸುವ ಮೂಲಕ ಶಾಸಕರ ನೇತೃತ್ವದಲ್ಲಿ ಸುಮಾರು ೯೦೦ ಕೋಟಿ ಅನುದಾನ ತಂದು ವಿವಿಧ ಕಾಮಗಾರಿಗಳನ್ನು ನಡೆಸಲಾಗಿದೆ.ಈ ಬಾರಿ ೨೩ ವಾರ್ಡ್ ಗಳಲ್ಲಿ ೨೨ ವಾರ್ಡ್ ಗಳಿಗೆ ಎಲ್ಲಾ ವರ್ಗದವರಿಗೂ ಟಿಕೇಟ್ ಹಂಚಲಾಗಿದೆ. ೧೮ ವಾರ್ಡ್ ಗಳಲ್ಲಿ ಜೆಡಿಎಸ್ ಜಯಭೇರಿ ಬಾರಿಸುವ ಮೂಲಕ ಮತ್ತೆ ಪುರಸಭೆಯ ಅಧಿಕಾರ ಹಿಡಿಯುವುದು ಶತಸಿದ್ಧ .ನಮ್ಮಲ್ಲಿ ಯಾವುದೇ ರೀತಿಯ ಗೊಂದಲವಿಲ್ಲ,ವಾರ್ಡ್ ಸಭೆಯಲ್ಲಿ ಹಾಗೂ ಕಾರ್ಯಕರ್ತರ ಒಮ್ಮತದ ನಿರ್ಣಯ ಪಡೆದು ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು.