ಹಾಸನ ಮೇ೨೮:-ಅಬಕಾರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಗೋಪಾಲಯ್ಯ ಅವರು ಮೇ೨೯ ರಂದು ಬೆಳಗ್ಗೆ ೯.೩೦ಕ್ಕೆ ಹಾಸನಕ್ಕೆ ಆಗಮಿಸಲಿರುವವರು.
ಅಂದು ಬೆಳಗ್ಗೆ ೧೦.೩೦ಕ್ಕೆ ಮುಖ್ಯಮಂತ್ರಿಗಳು ಕೋವಿಡ್೧೯ ನಿಯಂತ್ರಣ ಕುರಿತಂತೆ ನಡೆಸಲಿರುವ ವಿಡಿಯೋ ಸಂವಾದದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಭಾಗವಹಿಸಲಿದ್ದಾರೆ.
ವಿಡಿಯೋ ಸಂವಾದದ ನಂತರ ೧೨.೩೦ಕ್ಕೆ ಜಿಲ್ಲಾಧಿಕಾರಿಗಳು ಮತ್ತು ಉನ್ನತ ಅಧಿಕಾರಿಗಳೊಂದಿಗೆ ಕೋವಿಡ್ ನಿರ್ವಹಣೆ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸುವ ಸಚಿವರು ಮದ್ಯಾಹ್ನ ೩ ಗಂಟೆಗೆ ಬೆಂಗಳೂರಿಗೆ ತೆರಳುವರು.
Tags
ಹಾಸನ
