ಭಾರತೀಯ ಜೈನ್ ಸಂಘಟನೆ, ಬೆಂಗಳೂರು ಇವರು ಸಾಂಸ್ಥಿಕ ಸಾಮಾಜಿಕ ಜವಾಬ್ದಾರಿ ಅಡಿಯಲ್ಲಿ ಒದಗಿಸುತ್ತಿರುವ ಬಿ.ಜೆ.ಎಸ್ – ಮಿಷನ್ ಆಕ್ಸಿಜನ್ ಬ್ಯಾಂಕ್ ಅನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಇಂದು ಉದ್ಘಾಟಿಸಿದರು.
ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾದಿಕಾರಿ ಡಾ. ವೀರೇಂದ್ರ ಹೆಗ್ಗಡೆ, ಆರೋಗ್ಯ ಇಲಾಖೆ ಸಚಿವ ಡಾ|| ಕೆ.ಸುಧಾಕರ್, ಭಾರತೀಯ ಜೈನ ಸಂಘಟನೆ ಸಂಸ್ಥಾಪಕ ಶಾಂತಿಲಾಲ್ ಮುತ್ತ, ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷ ರಾಜೇಂದ್ರ ಲಂಕರ, ಮುಖ್ಯಮಂತ್ರಿಗಳ ಕಾರ್ಯದರ್ಶಿ ಎಸ್.ಸೆಲ್ವಕುಮಾರ್ ಉಪಸ್ಥಿತರಿದ್ದರು.
Tags
ರಾಜ್ಯ