ಹಾಸನ ಕೋವಿಡ್-19ರ ಹಿನ್ನೆಲೆಯಲ್ಲಿ ಹಾಸನದ ಜನತೆಗೆ ನೆರವಾಗುವ ಉದ್ದೇಶದಿಂದ ಕೆಎಡಿಬಿ ಮಾಜಿ ಸದಸ್ಯರು ಹಾಗೂ ಬಿಜೆಪಿ ಮುಖಂಡರಾದ ಶ್ರೀ ದೇವರಾಜೇಗೌಡರು ಆಯೋಜಿಸಿದ್ದ ಉಚಿತ ಆಂಬುಲೆನ್ಸ್ ಸೇವೆಗೆ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ ಗೋಪಾಲಯ್ಯ ಇಂದು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಶ್ರೀ ಗಿರೀಶ್, ಸಿಇಒ ಶ್ರೀ ಪರಮೇಶ್, ಎಸ್ಪಿ ಶ್ರೀ ಶ್ರೀನಿವಾಸನ್ ಗೌಡ, ಡಿಹೆಚ್ಒ ಶ್ರೀ ಸತೀಶ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.