ಚಿಕ್ಕಮಗಳೂರು.: ನಾನು ಸಿಎಂ ಆಗಬೇಕೆಂಬ ಕಾರಣಕ್ಕೆ ಗಡ್ಡ ಬಿಟ್ಟಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ.
ತಾಲೂಕಿನ
ಮಲ್ಲೇನಹಳ್ಳಿಯಲ್ಲಿ ವಿವಿಧ ಕಾಮಗಾರಿಗಳನ್ನ ಉದ್ಘಾಟಿಸಿ ಮಾತನಾಡಿದ ಅವರು, ವಿಜಯನಗರದ ಮೈಲಾರಲಿಂಗ
ಸ್ವಾಮಿಯ ಕಾರ್ಣೀಕದ ಬಗ್ಗೆ ನನಗೆ ಗೊತ್ತಿಲ್ಲ. ನಾನಂತು ಮುಖ್ಯಮಂತ್ರಿ ಆಗಬೇಕೆಂದು ಗಡ್ಡ
ಬಿಟ್ಟಿಲ್ಲ ಎಂದು ನಕ್ಕರು. ಗಡ್ಡಾಧಾರಿ ಮುಖ್ಯಮಂತ್ರಿ ಆಗುತ್ತಾರೆ ಎಂದು ಕಾರ್ಣೇಕ ಹೇಳಿರುವುದು
ನಿಜವಾಗಿದ್ದರೆ ಬಹಳ ಜನ ಗಡ್ಡ ಬಿಡಬಹುದು. ಯಾರು ಮುಖ್ಯಮಂತ್ರಿ ಆಕಾಂಕ್ಷಿ ಇದ್ದಾರೋ ಅವರೆಲ್ಲಾ
ಗಡ್ಡ ಬಿಡಲು ಪ್ರಾರಂಭಿಸಬಹುದು ಎಂದರು.
ನಾನು ಕಾಲೇಜು
ದಿನಗಳಿಂದಲೂ ನಿರಂತರವಾಗಿ ಗಡ್ಡ ಬಿಡುತ್ತಿದ್ದೇನೆ, ಹಣೆಗೆ ತಿಲಕ, ಕಿವಿಗೆ ಮುರ, ಗಡ್ಡ ನನ್ನ
ಐಡೆಂಟಿಟಿಯ ಒಂದು ಭಾಗ. ಭಗವಂತ ಏನೇನು ಬರೆದಿದ್ದಾನೋ, ತಾಯಿಯ ಆಶೀರ್ವಾದ ಏನಿದೆಯೋ ಗೊತ್ತಿಲ್ಲ,
ಆದರೆ ಮುಖ್ಯಮಂತ್ರಿ ಆಗಬೇಕೆಂದು ನಾನಂತೂ ಗಡ್ಡ ಬಿಟ್ಟಿಲ್ಲ ಎಂದು ಸ್ಪಷ್ಟಪಡಿಸಿದರು. ನನ್ನ
ನೋಡಿದವರು ದೂರದಿಂದಲೇ ಸಿ.ಟಿ.ರವಿ ಎಂದು ಹೇಳಲು ಇದು ನನ್ನ ಐಡೆಂಟಿಟಿಯ ಭಾಗ. ನನಗೆ ಪಕ್ಷನಿಷ್ಠೆ
ಪರಿಶ್ರಮದ ಮೇಲೆ ಮಾತ್ರ ನಂಬಿಕೆ ಎಂದು ಹೇಳಿದರು.
ಮಾಜಿ ಪ್ರಧಾನಿ ದೇವೇಗೌಡರನ್ನು ರವರನ್ನು ಭೇಟಿಯಾದ ಸಿ.ಎಂ ಬಸವರಾಜ್ ಬೊಮ್ಮಾಯಿ
ಕರ್ನಾಟಕ
ಮತ್ತು ತಮಿಳುನಾಡು ಎರಡು ರಾಜ್ಯಗಳು ರಾಜಕಾರಣ ಮಾಡದೆ ಎರಡೂ ರಾಜ್ಯಕ್ಕೆ ಅನುಕೂಲವಾಗುವಂತೆ ಮಧ್ಯಮ
ಮಾರ್ಗದಲ್ಲಿ ಮೇಕೆದಾಟು ಯೋಜನೆ ಮಾಡಬೇಕು. ಮೇಕೆದಾಟು ಯೋಜನೆ ವಿರೋಧಿಸಿ ತಮಿಳುನಾಡು ಬಿಜೆಪಿ
ಘಟಕದ ಅಧ್ಯಕ್ಷ ಅಣ್ಣಾಮಲೈ ಉಪವಾಸ ಮಾಡುವುದಾಗಿ ಹೇಳಿರುವ ಬಗ್ಗೆ ಭಾನುವಾರ ಸುದ್ದಿಗಾರರ ಪ್ರಶ್ನೆ
ಮಾಡಿದಾಗ, ಬೆಂಗಳೂರಿನಲ್ಲಿ ಶೇ.30ರಷ್ಟು ತಮಿಳುನಾಡಿನವರೇ ಇದ್ದಾರೆ. ದೇಶದ ಎಲ್ಲ ರಾಜ್ಯದ ಜನ
ಬೆಂಗಳೂರಿನಲ್ಲಿದ್ದಾರೆ. ಎರಡೂ ರಾಜ್ಯದ ಮುಖ್ಯಮಂತ್ರಿಗಳು ರಾಜಕಾರಣ ಮಾಡದೆ ವಾಸ್ತವಿಕ
ನೆಲೆಯಲ್ಲಿ ಯೋಚನೆ ಮಾಡಬೇಕು ಎಂದರು
