ಬೆಂಗಳೂರು : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದ ಸರ್ಕಾರದಲ್ಲಿ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದ 29 ಮಂದಿ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಹೈಕಮಾಂಡ್ ಜೊತೆಗಿನ ಸಮಾಲೋಚನೆ ಬಳಿಕ ಖಾತೆ ಹಂಚಿಕೆಯಾಗಿದ್ದು ರಾಜ್ಯಪಾಲರ ಕಚೇರಿಯಿಂದ ಅಧಿಕೃತವಾಗಿ ಪಟ್ಟಿ ಪ್ರಕಟವಾಗಿದೆ.
ಖಾತೆ ಹಂಚಿಕೆಯಲ್ಲಿ ಬಿಎಸ್ವೈ ಸರ್ಕಾರದಲ್ಲಿದ್ದ ಸಚಿವರಿಗೆ ಬಹುತೇಕ ಹಳೆಯ ಖಾತೆಗಳನ್ನು ಮುಂದುವರಿಸಿದ್ದು, ಕೆಲವು ಸಣ್ಣಪುಟ್ಟ ಬದಲಾವಣೆ ಮಾಡಲಾಗಿದೆ. ಇನ್ನು ಈ ಬಾರಿ ಸಂಘ ನಿಷ್ಠರಿಗೆ ಕ್ಯಾಬಿನೆಟ್ ನಲ್ಲಿ ಬಂಪರ್ ನೀಡಿದ್ದು, ಅರಗ ಜ್ಞಾನೇಂದ್ರಗೆ ಗೃಹ, ಸುನೀಲ್ ಕುಮಾರ್ಗೆ ಇಂಧನ, ಬಿ.ಸಿ.ನಾಗೇಶ್ ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯಂತಹ ಮಹತ್ವದ ಖಾತೆ ನೀಡಲಾಗಿದೆ.
ಯಾರಿಗೆ ಯಾವ ಖಾತೆ
• ಬಸವರಾಜ್ ಬೊಮ್ಮಾಯಿ – ಆರ್ಥಿಕ ಇಲಾಖೆ, ಗುಪ್ತಚರ ಇಲಾಖೆ, ಸಂಸದೀಯ ವ್ಯವಹಾರಗಳ ಇಲಾಖೆ, ಬೆಂಗಳೂರು ನಗರಾಭಿವೃದ್ಧಿ ಇಲಾಖೆ, ಹಂಚಿಕೆಯಾಗದ ಎಲ್ಲ ಖಾತೆಗಳು
• ಅರಗ ಜ್ಞಾನೇಂದ್ರ – ಗೃಹ ಇಲಾಖೆ
• ಆರ್. ಅಶೋಕ್ – ಕಂದಾಯ
• ಶ್ರೀರಾಮುಲು – ಸಾರಿಗೆ, ಹಿಂದುಳಿದ ವರ್ಗಗಳ ಕಲ್ಯಾಣ
• ಸೋಮಣ್ಣ – ವಸತಿ ಮತ್ತು ಮೂಲಸೌಕರ್ಯ
• ಅಶ್ವಥ ನಾರಾಯಣ – ಐಟಿಬಿಟಿ, ಉನ್ನತ ಶಿಕ್ಷಣ ಇಲಾಖೆ
• ಕೋಟಾ ಶ್ರೀನಿವಾಸಪೂಜಾರಿ – ಸಮಾಜ ಕಲ್ಯಾಣ ಇಲಾಖೆ
• ಮುರುಗೇಶ್ ನಿರಾಣಿ – ಬೃಹತ್ ಮತ್ತುಮಧ್ಯಮ ಕೈಗಾರಿಕೆ
• ಉಮೇಶ್ ಕತ್ತಿ – ಅರಣ್ಯ ಇಲಾಖೆ, ಆಹಾರ ಇಲಾಖೆ
• ಮಾಧುಸ್ವಾಮಿ – ಕಾನೂನು ಮತ್ತು ಸಂಸದೀಯ ಇಲಾಖೆ, ಸಣ್ಣ ನೀರಾವರಿ ಇಲಾಖೆ
• ಸಿ ಸಿ ಪಾಟೀಲ್ – ಲೋಕೋಪಯೋಗಿ ಇಲಾಖೆ
• ಗೋವಿಂದ ಕಾರಜೋಳ – ಬೃಹತ್ ನೀರಾವರಿ ಇಲಾಖೆ
• ಶಶಿಕಲಾ ಜೊಲ್ಲೆ – ಮುಜರಾಯಿ ಇಲಾಖೆ, ಹಜ್ ಮತ್ತು ವಕ್ಫ್ ಇಲಾಖೆ
• ಗೋಪಾಲಯ್ಯ – ಅಬಕಾರಿ ಇಲಾಖೆ
• ಎಸ್ ಅಂಗಾರ – ಮೀನುಗಾರಿಕೆ, ಬಂದರು, ಒಳನಾಡು ಜಲಸಾರಿಗೆ ಇಲಾಖೆ
• ಆನಂದ್ ಸಿಂಗ್ – ಪ್ರವಾಸೋದ್ಯಮ ಇಲಾಖೆ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ
• ಡಾ. ಕೆ ಸುಧಾಕರ್ – ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ
• ಶಿವರಾಂ ಹೆಬ್ಬಾರ್ – ಕಾರ್ಮಿಕ ಇಲಾಖೆ
• ಬಿ ಸಿ ಪಾಟೀಲ್ – ಕೃಷಿ ಇಲಾಖೆ
• ಎಂಟಿಬಿ ನಾಗರಾಜ್ – ಪೌರಾಡಳಿತ
• ಮುನಿರತ್ನ – ತೋಟಗಾರಿಕೆ, ಯೋಜನೆ, ಕಾರ್ಯಕ್ರಮ ನಿರ್ವಹಣೆ ಮತ್ತು ಸಾಂಖ್ಯಿಕ ಇಲಾಖೆ
• ಬಿ ಸಿ ನಾಗೇಶ್, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ
• ಸುನೀಲ್ ಕುಮಾರ್ , ಇಂಧನ ಇಲಾಖೆ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ
• ಈಶ್ವರಪ್ಪ – ಗ್ರಾಮೀಣಾಭಿವೃದ್ಧಿ ಇಲಾಖೆ
• ಹಾಲಪ್ಪಾ ಆಚಾರ್ – ಗಣಿ ಮತ್ತು ಭೂವಿಜ್ಞಾನ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಸಬಲೀಕರಣ ಇಲಾಖೆ
• ಶಂಕರ್ ಪಾಟೀಲ್ – ಮುನೇನಕೊಪ್ಪ, ಜವಳಿ ಮತ್ತು ಕೈಮಗ್ಗ ಇಲಾಖೆ, ಸಕ್ಕರೆ ಇಲಾಖೆ
• ಎಸ್ ಟಿ ಸೋಮಶೇಖರ – ಸಹಕಾರ ಇಲಾಖೆ
• ನಾರಾಯಣ ಗೌಡ – ರೇಷ್ಮೆ ಇಲಾಖೆ, ಯುವ ಜನ ಮತ್ತು ಕ್ರೀಡಾ ಇಲಾಖೆ
• ಪ್ರಭು ಚೌಹಾಣ್ – ಪಶು ಸಂಗೋಪನೆ ಇಲಾಖೆ
• ಬೈರತಿ ಬಸವರಾಜು – ನಗರಾಭಿವೃದ್ಧಿ ಇಲಾಖೆ