ಹಾಸನ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತದಲ್ಲಿ ಮೂರು ವರ್ಷದ ಅವಳಿ ಮಕ್ಕಳು ಸಾವು

ಹಾಸನ: ಹಾಸನ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ತಂದೆ-ತಾಯಿ ಜತೆಗಿದ್ದ ಮೂರು ವರ್ಷದ ಅವಳಿ ಮಕ್ಕಳಿಬ್ಬರೂ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಹಾಸನದ ಭೂವನಹಳ್ಳಿಯ ಸಮೀಪ ಈ ಅಪಘಾತ ಸಂಭವಿಸಿದೆ.

ಹಾಸನದ ಗವೇನಹಳ್ಳಿಯ ಶಿವಾನಂದ್-ಜ್ಯೋತಿ ದಂಪತಿಯ ಅವಳಿ ಮಕ್ಕಳು ಪ್ರಣತಿ (3), ಪ್ರಣವ್ (3) ಇಬ್ಬರೂ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಹಾಸನ ಹೊರ ವಲಯದ ಬೂವನಹಳ್ಳಿ ಬಳಿ ಬೈಕ್​ಗೆ ಲಾರಿ ಡಿಕ್ಕಿಯಾಗಿದೆ ಎಂದು ತಿಳಿದುಬಂದಿದೆ. ಅಪಘಾತದ ಬಳಿಕ ಲಾರಿ ನಿಲ್ಲಿಸದೆ ಲಾರಿ ಚಾಲಕ ಪರಾರಿ ಆಗಿದ್ದ. ಅಪಘಾತ ಸ್ಥಳದಿಂದ ಮೂರು ಕಿಲೋಮೀಟರ್ ಮುಂದೆ ಹೋಗುವಾಗ ಮತ್ತೆ ಮೂರು ಬೈಕ್​ಗಳಿಗೆ ಲಾರಿ ಡಿಕ್ಕಿ ಹೊಡೆದಿದೆ. ರಾಷ್ಟ್ರೀಯ ಹೆದ್ದಾರಿ 75ರ ರಿಂಗ್ ರಸ್ತೆಯ ಬೂವನಹಳ್ಳಿಯಿಂದ ಹೊಸಕೊಪ್ಪಲು ನಡುವೆ ಅದೇ ಲಾರಿ ನಾಲ್ಕು ಬೈಕ್​ಗಳಿಗೆ ಡಿಕ್ಕಿ ಆಗಿದೆ. ಲಾರಿ ಹಿಂಬಾಲಿಸಿದ ಜನರು ಮೈಸೂರು ರಸ್ತೆಯ ಹೊಸಕೊಪ್ಪಲು ಬಳಿ ಲಾರಿ ತಡೆದು ನಿಲ್ಲಿಸಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

Post a Comment

Previous Post Next Post