ಬೇಲೂರು : ರಾಜ್ಯ ಬಿಜೆಪಿ ಮಹಿಳಾ ಘಟಕದ ಕೋಶಾಧ್ಯಕ್ಷೆ ಹಾಗೂ ಉದ್ಯಮಿ ಸುರಭಿರಘು ಅವರು ತಮ್ಮ ಹುಟ್ಟು ಹಬ್ಬವನ್ನು ರೋಗಿಗಳಿಗೆ ಹಣ್ಣು, ಹಾಲು, ಬ್ರೆಡ್ ವಿತರಿಸುವ ಮೂಲಕ ಆಚರಿಸಿಕೊಂಡರು.
| ಬೇಲೂರಿನಲ್ಲಿ ಬಿಜೆಪಿ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಸುರಭಿರಘು ಅವರು ತಮ್ಮ ಹುಟ್ಟು ಹಬ್ಬವನ್ನು ರೋಗಿಗಳಿಗೆ ಹಣ್ಣು, ಹಾಲು, ಬ್ರೆಡ್ ವಿತರಿಸುವ ಮೂಲಕ ಆಚರಿಸಿಕೊಂಡರು |
ಮೊದಲಿಗ ಶ್ರೀಚನ್ನಕೇಶವಸ್ವಾಮಿ ದೇವರಿಗೆ ಪೂಜೆ ಸಲ್ಲಿಸಿದರು. ಆನಂತರ ದೇಗುಲದ ಮುಂಭಾಗದ ಆವರಣದಲ್ಲಿ ಅಭಿಮಾನಿಗಳು ಹಾಗೂ ಪಕ್ಷದ ಪ್ರಮುಖರು ಕೇಕ್ ಕತ್ತರಿಸುವ ಮೂಲಕ ಹುಟ್ಟುಹಬ್ಬ ಆಚರಿಸಿ ಶುಭಕೋರಿದರು. ಹುಟ್ಟು ಹಬ್ಬದ ಅಂಗವಾಗಿ ಜಾವಗಲ್ ಗ್ರಾಮದಲ್ಲಿ ರಕ್ತದಾನ ಶಿಬಿರ ಏರ್ಪಡಿಸಲಾಗಿತ್ತು.
ಈ ಸಂದರ್ಭ ಮಾತನಾಡಿದ ಸುರಭಿರಘು ಅವರು, ಪ್ರತಿವರ್ಷನೂ ಹುಟ್ಟುಹಬ್ಬ ಬರುತ್ತದೆ. ಇಂದು ನನ್ನ ಹುಟ್ಟು ಹಬ್ಬವನ್ನು ನನ್ನ ತೌವರು ಮನೆಯಲ್ಲಿ ಆಚರಿಸಿಕೊಳ್ಳುತ್ತಿರುವುದು ಸಂತೋಷವಾಗಿದೆ. ನನಗೆ ಸಮಾಜಸೇವೆ ಮಾಡುವ ಶಕ್ತಿ ದೇವರು ಕರುಣಿಸಲಿ ಎಂದು ಶ್ರೀಚನ್ನಕೇವವಸ್ವಾಮಿ ದೇವರಲ್ಲಿ ಕೇಳಿಕೊಂಡು ಪೂಜೆ ಸಲ್ಲಿಸಿದ್ದೇನೆ. ಈ ಕ್ಷೇತ್ರದ ಜನರ ಕಷ್ಟಸುಖದಲ್ಲಿ ನಾನು ಭಾಗಿಯಾಗುವಂತೆ ನನಗೆ ಆಶೀರ್ವದಿಸಲಿ ಎಂದರು.
ನನ್ನ ಹುಟ್ಟು ಹಬ್ಬದ ಅಂಗವಾಗಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು, ಹಾಲು, ಬ್ರೆಡ್ ವಿತರಿಸಲಾಗುತ್ತಿದೆ. ಜಾವಗಲ್ನಲ್ಲಿ ರಕ್ತದಾನ ಶಿಬಿರ ಏರ್ಪಡಿಸಲಾಗಿದೆ. ೫ ಶಾಲೆಗಳಿಗೆ ಪುಸ್ತಕ ವಿತರಿಸಿದ್ದೇನೆ ಎಂದು ತಿಳಿಸಿದರು. ಈ ಸಂದರ್ಭ ತಾಲ್ಲೂಕು ಮಹಿಳಾ ಬಿಜೆಪಿ ಘಟಕದ ಅಧ್ಯಕ್ಷೆ ಶೋಭಗಣೇಶ್, ತಾ.ಪಂ.ಸದಸ್ಯ ಶಶಿಧರ್, ಡಾ.ವಿಜಯ್, ಉಧ್ಯಮಿ ಸಂತೋಷ್, ಗ್ರಾ.ಪಂಸದಸ್ಯೆ ಸುಜಾತ, ಪ್ರಮುಖರಾದ ಶಮಂತ್, ತೀರ್ಥಕುಮಾರಿ ದೇಗುಲದ ಸಮಿತಿ ಸದಸ್ಯೆ ವಿಜಯಲಕ್ಷಿö್ಮÃ ಇತರರು ಇದ್ದರು.