NH373ರಲ್ಲಿ ಹಾಸನ-ಬೇಲೂರು , ಎಡೆಗೌಡನಹಳ್ಳಿ ಬಿಳಿಕೆರೆ ರಸ್ತೆ 2 ಪಥದಿಂದ 4 ಪಥದ ರಸ್ತೆಗೆ ವಿಸ್ತರಿಸಲು ಅನುಮೋದನೆ

ಸಂಸದ ಪ್ರತಾಪ ಸಿಂಹ ಬುಧವಾರ ಇಲ್ಲಿಗೆ ಆಗಮಿಸಿದ್ದ ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಈ ಕುರಿತು ಮನವಿ ಸಲ್ಲಿಸಿದರು. ಇದಕ್ಕೆ ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿ ಅನುಮೋದನೆ ನೀಡಿದ್ದಾರೆ ಎಂದು ಪ್ರತಾಪ ಸಿಂಹ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ,

ಚನ್ನರಾಯಪಟ್ಟಣ- ಹೊಳೆನರಸೀಪುರ ಅರಕಲಗೂಡು- ಕೊಡ್ಲಿಪೇಟೆ- ಮಡಿಕೇರಿ- ವಿರಾಜಪೇಟೆ ಮಾರ್ಗವಾಗಿ ಮಾಕುಟ್ಟಿ ಸಂಪರ್ಕಿಸುವ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿ ಎಂದು ಘೋಷಿಸಲು ಕೇಂದ್ರ ಸಚಿವರು ಒಪ್ಪಿದ್ದಾರೆ ಹೆದ್ದಾರಿಯ ಅಭಿವೃದ್ಧಿಯು ಕೊಡಗು ಮತ್ತು ಹಾಸನ ಜಿಲ್ಲೆಗಳಿಂದ ಕಣ್ಣೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕವನ್ನು ಸುಲಭಗೊಳಿಸುತ್ತದೆ.ಎಂದು ಪ್ರತಾಪ ಸಿಂಹ ತಿಳಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ 373ರಲ್ಲಿ ಹಾಸನ-ಬೇಲೂರು ಹಾಗೂ ಎಡೆಗೌಡನಹಳ್ಳಿ ಬಿಳಿಕೆರೆ ರಸ್ತೆಯನ್ನು ಎರಡು ಪಥದಿಂದ ನಾಲ್ಕು ಪಥದ ರಸ್ತೆಗೆ ವಿಸ್ತರಿಸಲು ಅನುಮೋದನೆ, ರಾಷ್ಟ್ರೀಯ ಹೆದ್ದಾರಿ 275ರ ಪಿರಿಯಾಪಟ್ಟಣ ಟೌನ್ ವ್ಯಾಪ್ತಿಯಲ್ಲಿ ರಸ್ತೆ ಅಭಿವೃದ್ಧಿ ಕಾಮ ಗಾರಿಗೆ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

Post a Comment

Previous Post Next Post