ರಂಗನ್ ವರದಿ ಜಾರಿ ಬೇಡಕೇಂದ್ರದ ಕ್ರಮ ಖಂಡಿಸಿ ಬಂದ್ ಆಚರಿಸಲು ನಿರ್ಧಾರ

ಹಾಸನ: ಕಸ್ತೂರಿ ರಂಗನ್ ವರದಿ ಅನುಷ್ಠಾನಕ್ಕೆ ಕೇಂದ್ರ ಸರಕಾರ 4ನೇ ಬಾರಿ ಅಧಿ ಸೂಚನೆ ಹೊರಡಿಸಿರುವ ಕ್ರಮ ವಿರೋಧಿಸಿ ಹಾಸನ, ಕೊಡಗು, ಮತ್ತು ಚಿಕ್ಕಮಗಳೂರು ಜಿಲ್ಲೆ ಬಂದ್ ಮಾಡಲು ನಿರ್ಣಯಿಸಲಾಗಿದೆ.
ಈ ಬಗ್ಗೆ ಸಭೆ ನಡೆಸಿರುವ ವಿವಿಧ ಪಕ್ಷ ಸಂಘಟನೆಗಳ ಮುಖಂಡರು, ಬೆಳೆಗಾರರು ಕಸ್ತೂರಿ ರಂಗನ್ ವರದಿ ವಿರೋಧಿಸಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡು ಮೂರು ಜಿಲ್ಲೆಗಳಲ್ಲಿ ಪ್ರತಿಭಟನೆ, ಬಂದ್ ನಡೆಸಲು ತೀರ್ಮಾನಿಸಿದ್ದಾರೆ. 
ಪಶ್ಚಿಮ ಘಟ್ಟ ವ್ಯಾಪ್ತಿಯ ಪರಿಸರ ಸೂಕ್ಷ÷್ಮ ಪ್ರದೇಶಕ್ಕೆ ಸಂಬAಧಿಸಿದAತೆ 4ನೇ ಬಾರಿ ಅಧಿ ಸೂಚನೆ ಹೊರಡಿಸಲಾಗಿದೆ. ಜನರಿಗೆ ಮಾರಕವಾಗಿರುವ ಈ ವರದಿಯನ್ನು ವಿರೋಧಿಸಿ ಅನೇಕ ಬಾರಿ ಪ್ರತಿಭಟನೆ, ಮನವಿ ಸಲ್ಲಿಸಿದ್ದರೂ ಈ ಬಗ್ಗೆ ಕೇಂದ್ರಕ್ಕೆ ಸರಿಯಾದ ಮಾಹಿತಿ ನೀಡುವಲ್ಲಿ ರಾಜ್ಯ ವಿಫಲವಾಗಿದೆ ಎಂದು ಅಭಿಪ್ರಾಯ ಪಟ್ಟರು.
ಕೇಂದ್ರದಲ್ಲಿ ಬಿಜೆಪಿಯ 25 ಸಂಸದರಿದ್ದು, ಈ ಬಗ್ಗೆ ಸಂಸತ್‌ನಲ್ಲಿ ಚಕಾರ ಎತ್ತಿಲ್ಲ. ಈ ಅಧಿಸೂಚನೆ ಪ್ರಕಾರ ರಾಜ್ಯದ 10 ಜಿಲ್ಲೆಗಳ 1.572 ಗ್ರಾಮಗಳು ಒಳಪಡುತ್ತವೆ. ಇದರಲ್ಲಿ ಚಿಕ್ಕಮಗಳೂರು ಜಿಲ್ಲೆಯ 142 ಗ್ರಾಮಗಳು ಸೇರಿವೆ. ಚಿಕ್ಕಮಗಳೂರಿನ 32, ಕೊಪ್ಪ 32, ಮೂಡಿಗೆರೆ 26, ನರಸಿಂಹರಾಜಪುರ 31, ಶೃಂಗೇರಿ 21 ಗ್ರಾಮಗಳು ಒಳಪಡುತ್ತವೆ. ಇದರಿಂದ ಜಿಲ್ಲೆಯ ಲಕ್ಷಾಂತರ ಜನ ಬೀದಿಗೆ ಬೀಳಲಿದ್ದಾರೆ ಎಂದು ಮುಖಂಡರು ಆತಂಕ ವ್ಯಕ್ತಪಡಿಸಿದರು.
ಕರ್ನಾಟಕ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಮೋಹನ್ ಕುಮಾರ್, ಸಿಪಿಐನ ರೇಣುಕಾರಾಧ್ಯ, ವಿಜಯ್ ಕುಮಾರ್, ರಘು, ಬಿಎಸ್ಪಿ ರಾಧಾಕೃಷ್ಣ, ಕರವೇ ಅಧ್ಯಕ್ಷ ತೇಗೂರು ಜಗದೀಶ್, ಲಕ್ಷ÷್ಮಣ, ರಸೂಲ್ ಖಾನ್, ಮನು ಆರಾಧ್ಯ, ಉಮೇಶ್, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಯ ಬೆಳೆಗಾರರು, ಸಂಘಟನೆಯ ಮುಖಂಡರು ಸಭೆಯಲ್ಲಿದ್ದರು.
ಸರಣಿ ಬಂದ್ ಆಚರಣೆ
ಕಸ್ತೂರಿ ವರದಿಯನ್ನು ಕೇಂದ್ರ ಸರಕಾರ ವಾಪಸು ಪಡೆಯಬೇಕು ಎಂದು ಆಗ್ರಹಿಸಿ ಜುಲೈ 27 ರಂದು ಹಾಸನ ಬಂದ್, 28 ರಂದು ಕೊಡಗು, 29 ರಂದು ಚಿಕ್ಕಮಗಳೂರು ಬಂದ್ ನಡೆಸಲು ನಿರ್ಧರಿಸಲಾಯಿತು. ಇದಲ್ಲದೆ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮಸ್ಥರಿಂದ ಅರ್ಜಿ ಪಡೆದು ಕೇಂದ್ರ ಪರಿಸರ ಇಲಾಖೆಗೆ ಮನವಿ ಸಲ್ಲಿಸುವುದು, ಮೂರೂ ಜಿಲ್ಲೆಯ ಶಾಸಕರು ಮತ್ತು ಸಂಸದರನ್ನು ಭೇಟಿ ಮಾಡಿ ಸಮಸ್ಯೆ ವಿವರಿಸಿ ಬೆಂಗಳೂರಿನಲ್ಲಿ ಸಭೆ ನಡೆಸುವ ಜತೆಗೆ ಮುಖ್ಯಮಂತ್ರಿ ಭೇಟಿ ಮಾಡಿ ಮನವಿ ಸಲ್ಲಿಸುವುದು. ಜುಲೈ ಅಂತ್ಯದಲ್ಲಿ ಕೇಂದ್ರ ಪರಿಸರ ಖಾತೆ ಸಚಿವರನ್ನು ಭೇಟ ಮಾಡಿ ಮನವಿ ಸಲ್ಲಿಸಲು ಮುಖಂಡರು ಸಭೆಯಲ್ಲಿ ನಿರ್ಣಯ ಕೈಗೊಂಡರು. 
ಏನಿದು ಕಸ್ತೂರಿ ರಂಗನ್ ಸಮಿತಿ ವರದಿ:
ಗುಜರಾತ್, ಮಹಾರಾಷ್ಟç, ಗೋವಾ, ಕೇರಳ, ತಮಿಳುನಾಡು ಹಾಗೂ ಕರ್ನಾಟಕ ರಾಜ್ಯದ ಹಾಸನ, ಕೊಡಗು, ಚಿಕ್ಕಮಗಳೂರು ವ್ಯಾಪಿಸಿರುವ ಪಶ್ಚಿಮ ಘಟ್ಟದ 56,874 ಚದರ ಕಿಮೀ ವಿಸ್ತೀರ್ಣದ ಪ್ರದೇಶವನ್ನು ಅತಿ ಸೂಕ್ಷ÷್ಮ ಎಂದು ಕಸ್ತೂರಿ ರಂಗನ್ ಸಮಿತಿ ವರದಿ ನೀಡಿದೆ. ಪಶ್ಚಿಮ ಘಟ್ಟದ ನೂರಾರು ಗ್ರಾಮಗಳು ವಿಶ್ವ ಸಂಸ್ಥೆಯ ಯುನೆಸ್ಕೋ ವಿಶ್ವ ಪಾರಂಪರಿಕ ಪ್ರದೇಶಗಳಾಗಿ ಗುರುತಿಸಲ್ಪಡುತ್ತದೆ. ಒಂದು ವೇಳೆ ಯುನೆಸ್ಕೋ ಸೂಕ್ಷ್ಮ ತಾಣವಾಗಿ ಈ ಪ್ರದೇಶಗಳು ಘೋಷಣೆಯಾದರೆ ನೂರಾರು ವರ್ಷಗಳಿಂದ ಕೃಷಿ ಬದುಕನ್ನು ನಂಬಿ ಬದುಕಿರುವ ಇಲ್ಲಿನ ನೂರಾರು ಕುಟುಂಬಗಳು ತಮ್ಮ ಮೂಲ ಕಸುಬು ಕೃಷಿಯನ್ನು ಬಿಡುವ ಅನಿವಾರ್ಯತೆ ಎದುರಾಗಲಿದೆ. ಆದ್ದರಿಂದ ಪಶ್ಚಿಮ ಘಟ್ಟ ವ್ಯಾಪ್ತಿಯ ನೂರಾರು ಗ್ರಾಮಸ್ಥರು ಈ ಯೋಜನೆ ಜಾರಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. 
ವರದಿಯಲ್ಲಿ ಏನಿದೆ:
ಪಶ್ಚಿಮ ಘಟ್ಟ ಜೀವ ವೈವಿಧ್ಯಮಯ ಪ್ರದೇಶದಲ್ಲಿ ಅಪರೂಪದ ಸಸ್ಯ ಮತ್ತು ಪ್ರಾಣಿ ಸಂಕುಲ, ನದಿ ಮೂಲಗಳನ್ನು ಹೊಂದಿದೆ. ಹಾಸನ ಜಿಲ್ಲೆಯ ಸಕಲೇಶಪುರ, ಚಿಕ್ಕಮಗಳೂರು, ಕೊಡಗು ಭಾಗದಲ್ಲಿ ಹರಡಿದ್ದು, ಇಲ್ಲಿ ಈಗಾಗಲೇ ಶೇ.37ರಷ್ಟು ಸ್ಥಳೀಯ ಮೂಲ ನಿವಾಸಿಗಳು ಜೀವನ ನಡೆಸುತ್ತಿದ್ದು, ಈ ಪ್ರದೇಶವನ್ನು ಕಸ್ತೂರಿ ರಂಗನ್ ವರದಿ ಅತೀ ಸೂಕ್ಷ÷್ಮ ಪ್ರದೇಶ ಎಂದು ಗುರುತಿಸಿದೆ.

Post a Comment

Previous Post Next Post