ಹಾಸನ:- ಜಿಲ್ಲೆಯ ಗೊರೂರು ಹೇಮಾವತಿ ಜಲಾನಯನ ಪ್ರದೇಶದಲ್ಲಿ ಕಳೆದ ಕೆಲ ದಿನಗಳಿಂದ ಉತ್ತಮ ಮಳೆಯಾದ ಹಿನ್ನೆಲೆಯಲ್ಲಿ ಜಲಾಶಯಕ್ಕೆ ಹೆಚ್ಚಿನ ನೀರು ಹರಿದು ಬರುತ್ತಿರುವುದರಿಂದ ಯಾವುದೇ ಕ್ಷಣದಲ್ಲಾದರೂ ಜಲಾಶಯದಿಂದ ನದಿಗೆ ನೀರನ್ನು ಬಿಡುವ ಸಾಧ್ಯತೆಯಿರುವುದರಿಂದ ನದಿಯ ಅಕ್ಕಪಕ್ಕ ವಾಸಿಸುತ್ತಿರುವ ಜನತೆ ಸೂಕ್ತ ಸ್ಥಳಗಳಿಗೆ ತೆರಳುವಂತೆ ಹೇಮಾವತಿ ಜಲಾಶಯ ಯೋಜನೆಯ ಕಾರ್ಯಪಾಲಕ ಎಂಜಿನಿಯರ್ ಇಂದು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ .