ಬೆಂಗಳೂರು:ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ಸಂಘದ ಮನವಿ ಮೇರೆಗೆ ಹಿರಿಯ ಪತ್ರಕರ್ತ ರಾಮಣ್ಣ ಎಚ್.ಕೋಡಿಹೊಸಳ್ಲಿ ಅವರ ಚಿಕಿತ್ಸೆಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 1.35 ಲಕ್ಷ ರೂ ಪರಿಹಾರ ಮಂಜೂರು ಮಾಡಿದ್ದಾರೆ.
ಮುಂಗಾರು, ಸಂಯುಕ್ತ ಕರ್ನಾಟಕ ಸೇರಿದಂತೆ ಹಲವು ಮಾಧ್ಯಮಗಳಲ್ಲಿ ಕೆಲಸ ಮಾಡಿರುವ ರಾಮಣ್ಣ ಕೋಡಿಹೊಸಳ್ಳಿ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಶಸ್ತ್ರಚಿಕಿತ್ಸೆಗಾಗಿ ಸುಮಾರು ಮೂರು ಲಕ್ಷ ಕ್ಕೂ ಹೆಚ್ಚು ವೆಚ್ಚ ಮಾಡಿಕೊಂಡು ಸಂಕಷ್ಟದಲ್ಲಿರುವ ಬಗ್ಗೆ ನಾಗರಾಜಸ್ವಾಮಿ ಸೇರಿದಂತೆ ಕೆಲ ಪತ್ರಕರ್ತ ಗೆಳೆಯರು ಕೆಯುಡಬ್ಲ್ಯೂಜೆ ಗಮನಕ್ಕೆ ತಂದಿದ್ದರು.
ಹಿರಿಯ ಪತ್ರಕರ್ತರಾದ ರಾಮಣ್ಣ ಕೋಡಿಹೊಸಳ್ಳಿ ಅವರ ಚಿಕಿತ್ಸೆಗೆ ನೆರವಾಗುವಂತೆ ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ಮನವಿ ಮೇರೆಗೆ ಚಿಕಿತ್ಸೆಗಾಗಿ 1.35 ಲಕ್ಷ ರೂ ಪರಿಹಾರವನ್ನು ಮುಖ್ಯಮಂತ್ರಿ ಮಂಜೂರು ಮಾಡಿದ್ದಾರೆ.
Tags
ರಾಜ್ಯ