ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ದುಡಿಯುತ್ತಿರುವ ನೌಕರರಿಗೆ ಗುತ್ತಿಗೆ ಪದ್ದತಿ ರದ್ದುಗೊಳಿಸಿ ನೇರಪಾವತಿ ಜಾರಿಗೊಳಿಸುವುದು ಖಚಿತ ಎಂದು ಪೌರಾಡಳಿತ ಹಾಗೂ ಹಜ್ ಸಚಿವ ರಹೀಂಖಾನ್ ವಿಶ್ವಾಸ ವ್ಯಕ್ತಪಡಿಸಿದರು.
ನಗರದ ಶಾಸಕರ ಭವನದ ಸಮ್ಮೇಳನ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ನಗರಪಾಲಿಕೆ ನಗರಸಭೆ ಪುರಸಭೆ ಪಟ್ಟಣ ಪಂಚಾಯತಿ ಹೊರಗುತ್ತಿಗೆ ನೌಕರರ ಸಂಘ ಆಯೋಜಿಸಿದ್ದ ಸಚಿವರೊಂದಿಗಿನ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಸ ಸಾಗಿಸುವ ವಾಹನ ಚಾಲಕರು ನೀರು ಸರಬರಾಜು ಸಹಾಯಕರು ನಿಜವಾದ ದುಡಿಮೆಗಾರರಾಗಿದ್ದಾರೆ.ಕಸ ಗುಡಿಸುವ ಪೌರಕಾರ್ಮಿಕರನ್ನು ನೇರಪಾವತಿ ಅಡಿಗೆ ತಂದು ಇನ್ನುಳಿದ ಕಸ ಸಾಗಿಸುವ ಚಾಲಕರು ನೀರು ಸರಬರಾಜು ಸಹಾಯಕರನ್ನು ಗುತ್ತಿಗೆ ಪದ್ದತಿಯಲ್ಕೇ ಉಳಿಸಿರುವುದು ತಾರತಮ್ಯದ ಕ್ರಮವಾಗಿದೆ ಈ ನೌಕರರನ್ನು ನೇರಪಾವತಿ ವ್ಯವಸ್ಥೆಗೆ ತರುವ ಸಂಬಂದ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಅಗತ್ಯ ತೀರ್ಮಾನ ಕೈಗೊಳ್ಖಲಾಗುವುದು.ಬಜೆಟ್ ಅಧಿವೇಶನದ ನಂತರ ಅಧಿಕಾರಿಗಳು ಹಾಗೂ ಸಂಘದ ಪ್ರತಿನಿಧಿಗಳೊಂದಿಗೆ ಕುಂದುಕೊರತೆ ಸಭೆ ಆಯೋಜಿಸಿ ಸಮಸ್ಯೆಗಳ ಪರಿಹಾರಕ್ಕೆ ಪ್ರಯತ್ನಿಸಲಾಗುವುದು ಎಂದರು.ನಂತರ ನೌಕರರೊಂದಿಗೆ ಸಚಿವರು ಸಂವಾದಿಸಿದ ವೇಳೆಯಲ್ಲಿ ಹಾವೇರಿ ಜಿಲ್ಲೆಯಲ್ಲಿ ಮಾಜಿ ಮುಖ್ಯಮಂತ್ರಿಗಳ ಸ್ವಕ್ಷೇತ್ರ ಶಿಗ್ಗಾಂವಿಯ ಸವಣೂರು ಪುರಸಭೆಯ ಹೊರಗುತ್ತಿಗೆ ನೌಕರರಿಗೆ 22ತಿಂಗಳಿನಿಂದ ವೇತನ ಪಾವತಿಸದಿರುವುದು ರಾಮನಗರ ಜಿಲ್ಲೆಯಲ್ಲಿ ಪೌರಕಾರ್ಮಿಕರ ನೇಮಕಾತಿ ಪಟ್ಟಿ ಪ್ರಕಟವಾಗಿದ್ದರು ನೇಮಕಾತಿ ಆದೇಶ ನೀಡದ ಕುರಿತು ಹಲವು ಜಿಲ್ಲೆಗಳಲ್ಲಿ ಸಕಾಲಕ್ಕೆ ವೇತನ ನೀಡದೆ ಏಜೆನ್ಸಿಗಳು ಕಿರುಕುಳ ನೀಡುತ್ತಿರುವ ಬಗ್ಗೆ ಸಚಿವರ ಗಮನ ಸೆಳೆಯಲಾಯಿತು.
ಈ ಕುರಿತು ಶೀಘ್ರದಲ್ಲೆ ಜಿಲ್ಲಾ ಪ್ರವಾಸ ಮಾಡಿ ನೌಕರರ ಸಮಸ್ಯೆ ಇತ್ಯರ್ಥಗೊಳಿಸುವುದಾಗಿ ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಮಾತನಾಡಿ ಹೊರಗುತ್ತಿಗೆ ನೌಕರರ ನೇರಪಾವತಿ ಸಂಬಂದ ಪೌರಾಡಳಿತ ಸಚಿವರಿಗೆ ಅಗತ್ತ ಬೆಂಬಲ ನೀಡುವುದಾಗಿ ತಿಳಿಸಿದರು.
ಉದ್ಘಾಟನೆಗೆ ಮುನ್ನಾ ಪ್ರಸ್ತಾವಿಕ ನುಡಿಗಳನ್ನಾಡಿದ ಹೊರಗುತ್ತಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ಎಂ.ಬಿ.ನಾಗಣ್ಣಗೌಡ ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರು ನೇರಪಾವತಿ ಜಾರಿಗಾಗಿ ಕಳೆದ ಸರಕಾರದಲ್ಲಿ ತೀವ್ರ ಹೋರಾಟ ನಡೆಸಿದರೂ ಬಿಜೆಪಿ ಸರಕಾರ ತಿರುಗಿಯೂ ನೋಡಲಿಲ್ಲ.ಕಾಂಗ್ರೆಸ್ ಪಕ್ಷ ಪೌರಕಾರ್ಮಿಕರ ಖಾಯಂಗೊಳಿಸುವ ಭರವಸೆಯನ್ನು ತನ್ನ ಪ್ರಣಾಳಿಕೆಯಲ್ಲಿ ಸೇರ್ಪಡೆಗೊಳಿಸಿತು.ಇದೇ ಕಾರಣಕ್ಕೆ ಹೊರಗುತ್ತಿಗೆ ನೌಕರರು ದೊಡ್ಡ ಪ್ರಮಾಣದಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ್ದಾರೆ.ಈಗ ಪ್ರಣಾಳಿಕೆಯ ಅಂಶವನ್ನು ಜಾರಿಗೊಳಿಸುವ ಬದ್ದತೆಯನ್ನು ಕಾಂಗ್ರೆಸ್ ಸರಕಾರ ತೋರಬೇಕಿದೆ ಎಂದರು.ಬಿಬಿಎಂಪಿ ಪೌರಕಾರ್ಮಿಕರ ಸಂಘದ ನಾಯಕರಾದ ಕಾಮ್ರೇಡ್ ಮೈತ್ರಿಯವರು ಸಹ ನೇರಪಾವತಿ ಕುರಿತ ಅನಿವಾರ್ಯತೆ ಬಗ್ಗೆ ಸಚಿವರಿಗೆ ಮನವರಿಕೆ ಮಾಡಿದರು
ಸಂವಾದದಲ್ಲಿ ಹೊರಗುತ್ತಿಗೆ ನೌಕರರ ಸಂಘದ ಗೌರವಾಧ್ಯಕ್ಷ ವಿರೇಶ್. ಕಲ್ಬುರ್ಗಿ ವಿಭಾಗ ಸಂಚಾಲಕ ಸಿದ್ದರಾಮ ಪಾಟೀಲ.ಬೆಳಗಾವಿ ವಿಭಾಗದ ರಾಜೂ ಹೊಸಮನಿ ಬೆಂಗಳೂರು ವಿಭಾಗದ ಪುಟ್ಟಸ್ವಾಮಿ ಕರಾವಳಿ ವಿಭಾಗದ ಅಣ್ಣಪ್ಪ ಎಂ.ಎನ್ ಚಂದ್ರು ಮಹಂತೇಶ ಸೇರಿದಂತೆ ವಿವಿಧ ಜಿಲ್ಲೆಗಳ ನೂರಾರು ಹೊರಗುತ್ತಿಗೆ ನೌಕರರ ಮುಖಂಡರು ಭಾಗೀಯಾಗಿದ್ದರು.ಮಂಗಲ ಶಿವಣ್ಣ ಕಾರ್ಯಕ್ರಮ ನಿರೂಪಿಸಿದರು
Tags
ರಾಜ್ಯ