ಹಾಸನ : ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಮುಂದುವರಿದ ಕಾಡಾನೆ ದಾಳಿ
ಕಾಡಾನೆಗಳ ದಾಳಿಗೆ ಅಪಾರ ಪ್ರಮಾಣದ ಭತ್ತದ ಬೆಳೆ ನಾಶ
ಬೆಳೆ ಕಳೆದುಕೊಂಡು ಹಣೆ ಬಡಿದುಕೊಂಡು ಕಣ್ಣೀರಿಟ್ಟ ರೈತ
ಸಕಲೇಶಪುರ ತಾಲ್ಲೂಕಿನ, ವಳಲಹಳ್ಳ ಗ್ರಾಮದಲ್ಲಿ ಘಟನೆ
ಹಸನಾಗಿ ಬೆಳೆದಿದ್ದ ಭತ್ತ ಬೆಳೆಯನ್ನು ತಿಂದು, ತುಳಿದು ನಾಶ ಮಾಡಿರುವ ಕಾಡಾನೆಗಳು
ಫಸಲಿಗೆ ಬಂದಿದ್ದ ಭತ್ತದ ಬೆಳೆಯನ್ನು ಕಳೆದುಕೊಂಡು ಕಂಗಾಲಾದ ರೈತರು
ಗ್ರಾಮದ ಆನಂದಗೌಡ ಹಾಗೂ ಇತರೆ ರೈತರಿಗೆ ಸೇರಿದ ಭತ್ತದ ಗದ್ದೆಗಳು
ಸಾಲ ಮಾಡಿ ಹತ್ತಾರು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಭತ್ತದ ಬೆಳೆ
ಸುಮಾರು ಇಪ್ಪತ್ತಕ್ಕೂ ಹೆಚ್ಚು ಕಾಡಾನೆಗಳ ಹಿಂಡಿನಿಂದ ಬೆಳೆ ನಾಶ
ಸ್ಥಳಕ್ಕೆ ಬಾರದ ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಅನ್ನದಾತರ ಆಕ್ರೋಶ
ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹ
ಗದ್ದೆಗಳ ಪಕ್ಕದ ಕಾಫಿ ತೋಟದಲ್ಲೇ ಬೀಡುಬಿಟ್ಟಿರುವ ಗಜಪಡೆ
ಕಾಡಾನೆಗಳ ಹಾವಳಿ ಮೀತಿಮೀರಿದರು ಶಾಶ್ವತ ಪರಿಹಾರ ಕಂಡುಹಿಡಿಯದ ಸರ್ಕಾರ ಹಾಗೂ ಅರಣ್ಯ ಇಲಾಖೆಗೆ ಹಿಡಿಶಾಪ ಹಾಕುತ್ತಿರುವ ಸ್ಥಳೀಯರು
Tags
ಸಕಲೇಶಪುರ