ಹಾಸನ: ಛಾಯಾಗ್ರಾಹಕ ವೃತ್ತಿ ಅತ್ಯಂತ ಶ್ರೇಷ್ಠ, ಪುರಾತನ ಕಾಲದ ನೆನಪುಗಳನ್ನು ಇಂದಿಗೂ ಪ್ರಸ್ತುತ ಪಡಿಸುವಲ್ಲಿ ಛಾಯಾಗ್ರಾಹಕರು ಪ್ರಮುಖ ಪಾತ್ರ ವಹಿಸುತ್ತಾರೆ ಎಂದು ನಗರಸಭೆ ಅಧ್ಯಕ್ಷ ಚಂದ್ರೇಗೌಡ ಹೇಳಿದರು.
ನಗರದ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಇಂದು ಆಯೋಜಿಸಲಾಗಿದ್ದ ಹಾಸನ ಜಿಲ್ಲಾ ಛಾಯಾಗ್ರಾಹಕರ ಸಂಘದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿ, ದಶಕಗಳ ನೆನಪುಗಳನ್ನು ಒಂದು ಚಿತ್ರದ ಮೂಲಕ ನೆನಪಿಸುವ ಕಲೆ ಛಾಯಾಗ್ರಹಣ ದಿಂದ ಮಾತ್ರ ಸಾಧ್ಯ ಎಂದು ಶ್ಲಾಘಿಸಿದರು.
ಇತ್ತಿಚಿನ ದಿನಗಳಲ್ಲಿ ಛಾಯಾಗ್ರಾಹಣ ಶುಭ ಸಮಾರಂಭಗಳಳು ಹಾಗೂ ಅಶುಭ ಸಮಯದ ವೇಳೆಯೂ ಅವರ ಪಾತ್ರ ಅಪಾರ. ವಿವಾಹ ಅಥವಾ ಇನ್ನಿತರ ಶುಭ ಕಾರ್ಯಗಳ ವೇಳೆ ಫೋಟೋಗ್ರಾಫರ್ ಬರುವುದು ತಡವಾದರೆ ಅವರ ಚಡಪಡಿಕೆ ಒಬ್ಬ ಛಾಯಾಗ್ರಾಹಕ ನ ಪ್ರಾಮುಖ್ಯತೆಗೆ ಹಿಡಿದ ಕೈಗನ್ನಡಿಯಾಗಿದೆ, ತಮ್ಮ ವೃತ್ತಿ ಬದುಕಿನಲ್ಲಿ ತಮ್ಮನ್ನು ತಾವು ರಕ್ಷಣೆ ಮಾಡುವ ಜೊತೆಗೆ ಸಮಾಜಕ್ಕೆ ಉತ್ತಮ ಕೊಡುಗೆ ನೀಡುವಂತೆ ಕರೆ ನೀಡಿದರು.
ಸಂಘದ ರಾಜ್ಯಾಧ್ಯಕ್ಷ ನಾಗೇಶ್ ಮಾತನಾಡಿ ಇತ್ತೀಚಿನ ದಿನಗಳಲ್ಲಿ ಛಾಯಾಗ್ರಾಹಕರು ನಿರಂತರವಾಗಿ ಸಾವನ್ನಪ್ಪಿದ್ದಾರೆ ಅದ್ರಲ್ಲೂ ಕೋವಿ ಡ್ ನಂತರ ಸಾವಿನ ಸಂಖ್ಯೆ ಏರಿಕೆ ಆಗಿದೆ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಹಾಗೂ ವೃತ್ತಿ ಬದುಕಿನ ಒತ್ತಡ ಇದಕ್ಕೆಲ್ಲಾ ಕಾರಣ, ರಾಜರಿಣಿಗಳು ತಮ್ಮ ಕಾರ್ಯಕ್ರಮಗಳಲ್ಲಿ ಅವರನ್ನು ಮುಂಚೂಣಿಯಲ್ಲಿ ಬಳಸಿಕೊಂಡು ಅವರ ಯೋಗಕ್ಷೇಮದ ಬಗ್ಗೆ ನಿರ್ಲಕ್ಷ್ಯ ತೋರಿಸುವುದು ಎಸ್ಟು ಸರಿ ಎಂದು ಪ್ರಶ್ನಿಸಿದರು.
ಛಾಯಾಗ್ರಾಹಕ ವೃತ್ತಿ ಮಾಡುವುದು ಇತ್ತಿಚಿನ ದಿನಗಳಲ್ಲಿ ಸವಾಲಿನ ಕೆಲಸವಾಗಿದೆ, ರಾಜ್ಯದಲ್ಲಿ 2 ಸಾವಿರಕ್ಕೂ ಅಧಿಕ ಛಾಯಾಗ್ರಾಹಕರಿದ್ದು ಅವರ ಸಮಸ್ಯೆಗಳನ್ನು ಆಲಿಸುವಲ್ಲಿ ಅಳುವ ಸರ್ಕಾರಗಳು ವಿಫಲವಾಗಿವೆ. ಯಾವುದೇ ಕಾರ್ಯಕ್ರಮಗಳಲ್ಲಿ ತಮ್ಮ ಜೀವವನ್ನು ಒತ್ತೆ ಇಟ್ಟು ಚಿತ್ರಗಳನ್ನು ಸೆರೆ ಹಿಡಿಯುವ ಕೆಲಸ ಮಾಡುವ ಫೋಟೋಗ್ರಾಫರ್ ಗಳ ಬೇಡಿಕೆಗಳ ಬಗ್ಗೆ ಸರ್ಕಾರ ಗಮನ ಹರಿಸುವ ಕೆಲಸ ಮಾಡಬೇಕು ಎಂದರು.
ಕಳೆದ ಅನೇಕ ವರ್ಷಗಳ ಹೋರಾಟದ ಫಲವಾಗಿ ಸಚಿವ ಸಂತೋಷ್ ಲಾಡ್ ಛಾಯಾಗ್ರಾಹಕರನ್ನು ಕಾರ್ಮಿಕ ಇಲಾಖೆ ಅಡಿಯಲ್ಲಿ ಒಳಪಡಿಸಿ ಅವರು ಮೃತಪಟ್ಟರೆ ಸಹಾಯ ಧನ ನೀಡುವ ಮೂಲಕ ಉತ್ತಮ ಸಹಕಾರ ನೀಡಿದ್ದಾರೆ. ಆದರೆ ಛಾಯಾಗ್ರಾಹಕರು ಬದುಕಿದ್ದಾಗಲೇ ಅವರಿಗೆ ಸಹಾಯ ಆಗುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ಮನವಿ ಮಾಡಲಾಗಿದೆ ಎಂದರು.
ಈಗಾಗಲೆ ಛಾಯಾಗ್ರಾಹಕರ ಹಲವು ಬೇಡಿಕೆಗಳನ್ನು ಸರ್ಕಾರದ ಮುಂದೆ ಇಡಲಾಗಿದೆ ಅದರಲ್ಲಿ ಪ್ರಮುಖವಾಗಿ ಛಾಯಾಗ್ರಾಹಕರ ಕ್ಷೇಮಾಭಿವೃದ್ಧಿಗೆ 200.ಕೋಟಿ ಅನುಧಾನ, ವಯಸ್ಕ ಫೋಟೋಗ್ರಾಫರ್ ಗಳಿಗೆ ಪೆನ್ಶನ್ ಹಾಗೂ ಅವರ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಹಾಯ ಕಲ್ಪಿಸುವ ಬಗ್ಗೆ ಬೇಡಿಕೆಗಳನ್ನು ಸರ್ಕಾರದ ಮುಂದೆ ಇಡಲಾಗಿದೆ ಜೊತೆಗೆ ಕರ್ನಾಟಕ ಛಾಯಾಗ್ರಾಹಕ ಆಕಾಡೆಮಿ ಸ್ಥಾಪಿಸಿ ಛಾಯಾಗ್ರಾಹಕರ ಹಿತ ಕಾಯುವ ಕೆಲಸ ಮಾಡಬೇಕು ಎಂದು ಮನವಿ ಮಾಡಲಾಗಿದೆ ಎಂದರು.
ಕೆಲಸದ ವೇಳೆ ತಮ್ಮನ್ನು ತಾವು ರಕ್ಷಣೆ ಮಾಡಿಕೊಳ್ಳುವ ಕೆಲಸ ಮಾಡಬೇಕು ಜೊತೆಗೆ ಪ್ರತಿಯೊಂದು ಬೇಡಿಕೆಗಳ ಈಡೇರಿಕೆಗೆ ಸಂಘಟನೆಯಿಂದ ಮಾತ್ರ ಸಾಧ್ಯ ಈ ನಿಟ್ಟಿನಲ್ಲಿ ಎಲ್ಲರೂ ಸಂಘಟಿತರಾಗಿ ಮುಂದಿನ ದಿನಗಳಲ್ಲಿ ಛಾಯಾಗ್ರಾಹಕರಗೃಹ ನಿರ್ಮಾಣ ಮಂಡಳಿ, ಕೋ ಅಪರಟೀವ್ ಸೊಸೈಟಿ ನಿರ್ಮಾಣ ಮಾಡಿ ಸಧೃಡರಾಗೋಣ ಎಂದರು.